ಕೊಳ್ಳೇಗಾಲ: ಕುಡಿದ ಅಮಲಿನಲ್ಲಿ ಕಾಲುವೆಗೆ ಬಿದ್ದು ವ್ಯಕ್ತಿ ಮೃತ್ಯು
Update: 2020-02-22 13:08 GMT
ಕೊಳ್ಳೇಗಾಲ, ಫೆ.22: ಕುಡಿದ ಅಮಲಿನಲ್ಲಿ ಜಮೀನಿಗೆ ಹರಿಯುವ ಕಾಲುವೆ ನೀರಿನಲ್ಲಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಅಜ್ಜೀಪುರ ಗ್ರಾಮದ ರವಿಚಂದ್ರ (50) ಮೃತಪಟ್ಟ ವ್ಯಕ್ತಿ. ಇವರು ಅತಿಯಾಗಿ ಮದ್ಯ ಸೇವಸುತ್ತಿದ್ದರು. ಕುಡಿದ ಅಮಲಿನಲ್ಲಿ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಹಾಗೂ ಗ್ರಾಮಾಂತರ ಠಾಣೆಯ ಪಿಎಸ್ಐ ವಿ.ಸಿ.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಪವಿಭಾಗ ಆಸ್ಪತ್ರೆಗೆ ಸಾಗಿಸಿ ನಂತರ ವಾರಸುದಾರರಿಗೆ ಒಪ್ಪಿಸಲಾಯಿತು.
ಗ್ರಾಮಾಂತರ ಪೊಲೀಸ್ ಠಾಣೆಗೆ ಮೃತನ ಸಹೋದರ ವೆಂಕಟೇಶ್ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಸರ್ಕಾರಿ ವೈದ್ಯ ಡಾ.ರಾಜುರವರಿಂದ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.