ಅಪ್ರಾಪ್ತ ಬಾಲಕಿ ಅಪಹರಣ: ಆರೋಪಿ ಸೆರೆ

Update: 2020-02-22 15:50 GMT

ಮಂಗಳೂರು, ಫೆ.22: ಕುಂಜತ್ತಬೈಲ್‌ನ ಜಪ್ಪಿನಗುತ್ತು ನಿವಾಸಿ, ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಕಾವೂರು ಪೊಲೀಸರು ಆರೋಪಿಯನ್ನು ಬಾಗಲಕೋಟೆಯಲ್ಲಿ ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ನಿವಾಸಿ ಪರಶುರಾಮ (26) ಬಂಧಿತ ಆರೋಪಿ.

ಫೆ.14ರಂದು ಸಂಜೆ 16 ವರ್ಷದ ಬಾಲಕಿ ಶಾಲೆಯಿಂದ ಮನೆಗೆ ಬಂದ ಬಳಿಕ ಆರೋಪಿ ಪುಸಲಾಯಿಸಿ ಹೊರಗೆ ಕರೆದುಕೊಂಡು ಹೋಗಿದ್ದ. ಬಾಲಕಿಯನ್ನು ಕರೆದೊಯುತ್ತಿದ್ದಾಗ ಆಸುಪಾಸಿನ ಜನರು ಗಮನಿಸಿದ್ದರು. ಈ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ ಪುತ್ರಿ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯನ್ನು ಅಪಹರಿಸಲಾಗಿದೆ ಎಂದು ದೂರು ನೀಡಿದ್ದು, ಪೋಕ್ಸೋ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಾಗಲಕೋಟೆಯಲ್ಲಿ ಬಂಧಿಸಿ, ಬಾಲಕಿಯನ್ನು ಕರೆದುಕೊಂಡು ಬಂದಿದ್ದಾರೆ.

ಬಾಲಕಿಯ ಕುಟುಂಬದವರು ಮತ್ತು ಅಪಹರಣ ಪ್ರಕರಣದ ಆರೋಪಿ ಪರಶುರಾಮ ಯಾನೆ ಪರಶು ಬಾಗಲಕೋಟೆಯವರಾಗಿದ್ದು, ಮಂಗಳೂರಿಗೆ ಕೂಲಿ ಕೆಲಸಕ್ಕಾಗಿ ಬಂದವರಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News