ಬೇಕಲದಲ್ಲಿ ಬೈಕ್ -ಆಟೋರಿಕ್ಷಾ ಢಿಕ್ಕಿ: ಓರ್ವ ಮೃತ್ಯು; ಇಬ್ಬರಿಗೆ ಗಂಭೀರ ಗಾಯ

Update: 2020-02-24 04:00 GMT

ಕಾಸರಗೋಡು, ಫೆ.24: ಬೈಕ್ ಮತ್ತು ಆಟೋರಿಕ್ಷಾ ಢಿಕ್ಕಿ ಹೊಡೆದು ಸವಾರ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಬೇಕಲ ಸೇತುವೆ ಬಳಿ ನಡೆದಿದೆ.

ಮೃತಪಟ್ಟವರನ್ನು ಕೊಟ್ಟೋಡಿಯ ರಾಜೇಶ್(18) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಜಿಷ್ಣು(21) ಮತ್ತು ಶ್ರೀದಯಾಳ್(21) ಎಂಬವರನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾಲಕುನ್ನುನಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಳ್ಳಲು ರಾತ್ರಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೂವರು ಒಂದೇ ಬೈಕ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.  
ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News