ರಶೀದ್ ವಿಟ್ಲರಿಗೆ ಮಾಣಿಲಶ್ರೀ ಸನ್ಮಾನ
Update: 2020-02-24 13:50 GMT
ಬಂಟ್ವಾಳ : ದ.ಕ.ಜಿಲ್ಲಾ ವಕ್ಫ್ ಸಮಿತಿ ಸದಸ್ಯರು, ಎಂ. ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿಯಾಗಿರುವ ರಶೀದ್ ವಿಟ್ಲ ಅವರು ಸೋಮವಾರ ಮಾಣಿಲ ಶ್ರೀಧಾಮದ ಶ್ರೀ ಮಹಾಲಕ್ಷ್ಮಿ ಕ್ಷೇತ್ರಕ್ಕೆ ಭೇಟಿ ನೀಡಿದರು.
ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ನಾಡಿನ ಸಾಮರಸ್ಯತೆ, ಸಂಸ್ಕೃತಿ, ವಿದ್ಯಾಮಾನದ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭ ಮಾಣಿಲಶ್ರೀ ರಶೀದ್ ವಿಟ್ಲ ಅವರನ್ನು ಶಾಲು ಹೊದಿಸಿ, ಸನ್ಮಾನಿಸಿ ಕ್ಷೇತ್ರದ ಪ್ರಸಾದ ನೀಡಿ ಗೌರವಿಸಿದರು.