'ಅಮೂಲ್ಯಗೆ ಗುಂಡಿಕ್ಕಿ' ಹೇಳಿಕೆ: ಶ್ರೀರಾಮಸೇನೆ ಮುಖಂಡನ ವಿರುದ್ಧ ಪ್ರಕರಣ ದಾಖಲು
Update: 2020-02-24 14:46 GMT
ಬಳ್ಳಾರಿ, ಫೆ.24: ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಆರೋಪದಡಿ ಬಂಧನದಲ್ಲಿರುವ ವಿದ್ಯಾರ್ಥಿನಿ ಅಮೂಲ್ಯಗೆ ಪಿಸ್ತೂಲಿನಿಂದ ಗುಂಡಿಕ್ಕಿ ಎಂದು ವಿವಾದಿತ ಹೇಳಿಕೆ ನೀಡಿದ ಆರೋಪದಡಿ ಶ್ರೀರಾಮಸೇನೆ ಮುಖಂಡನ ವಿರುದ್ಧ ಬಳ್ಳಾರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಫೆ.22ರಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಶ್ರೀರಾಮಸೇನೆ ಸಂಚಾಲಕ ಸಂಜೀವ್ ಮರಡಿ, ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯಗೆ ಪಿಸ್ತೂಲಿನಿಂದ ಗುಂಡಿಕ್ಕಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ವಿವಾದಿತ ಹೇಳಿಕೆ ನೀಡಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು, ಸಂಜೀವ ಮರಡಿ ಅವರ ಹೇಳಿಕೆ ಕುರಿತ ವಿಡಿಯೊವನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.