ದಿಲ್ಲಿಯಲ್ಲಿ ಸಿಎಎ ಪ್ರತಿಭಟನಕಾರರ ಮೇಲೆ ದಾಳಿ: ಪೊಲೀಸ್ ಸಿಬ್ಬಂದಿ, ನಾಗರಿಕ ಮೃತ್ಯು

Update: 2020-02-26 10:20 GMT

ಹೊಸದಿಲ್ಲಿ: ಇಂದು ದಿಲ್ಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನಕಾರರ ನಡುವೆ ನಡೆದ ಹಿಂಸಾಚಾರದ ಪರಿಣಾಮ ಪೊಲೀಸ್ ಪೇದೆ ಮತ್ತು ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.

ಇಂದು ನಡೆದ ಹಿಂಸಾಚಾರದಲ್ಲಿ ಕಲ್ಲುತೂರಾಟ ನಡೆದಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ದುಷ್ಕರ್ಮಿಯೊಬ್ಬ ಪೊಲೀಸರ ಎದುರಲ್ಲೇ ಗುಂಡು ಹಾರಿಸಿದ್ದ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದರು. ಇದೀಗ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News