ಪಿಡಿಓ ಕರ್ತವ್ಯಕ್ಕೆ ಅಡ್ಡಿ: ದೂರು

Update: 2020-02-24 16:36 GMT

ಶಿರ್ವ, ಫೆ.24: ಕೋಳಿ ಸಾಕಾಣಿಕೆ ಮಾಡಲು ಅವಕಾಶ ನೀಡಕ್ಕಾಗಿ ಮಜೂರು ಗ್ರಾಪಂನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರತಾಪ್‌ಚಂದ್ರ ಶೆಟ್ಟಿ(35) ಎಂಬವರಿಗೆ ಜೀವ ಬೆದರಿಕೆ ಹಾಕಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಾಪ್‌ ಚಂದ್ರ ಶೆಟ್ಟಿ ಫೆ.24ರಂದು ಬೆಳಗ್ಗೆ ಹೇರೂರು ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಹೋಗಿ ಆರೋಪಿ ಮಹೇಶ್ ಶೆಟ್ಟಿ ಅವರ ಕೋಳಿ ಸಾಕಾಣಿಕೆ ಉದ್ಯಮದ ಪರವಾನಿಗೆ ತಾತ್ಕಾಲಿಕವಾಗಿ ರದ್ದು ಪಡಿಸಿದರು. ಈ ಕಾರಣಕ್ಕಾಗಿ ಮಹೇಶ್ ಶೆಟ್ಟಿ, ಪಿಡಿಓಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಲು ಬಂದು, ಜೀವಬೆದರಿಕೆ ಹಾಕಿ ಸರಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿರು ವುದಾಗಿ ದೂರಲಾಗಿದೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News