ದಿಲ್ಲಿ: ವ್ಯಕ್ತಿಯನ್ನು ಸುತ್ತುವರಿದು ರಕ್ತ ಒಸರುವಂತೆ ದೊಣ್ಣೆಗಳಿಂದ ಥಳಿಸಿದ ಸಿಎಎ ಬೆಂಬಲಿಗರು

Update: 2020-02-26 10:20 GMT

ಹೊಸದಿಲ್ಲಿ: ಇಂದು ರಾಜಧಾನಿಯಲ್ಲಿ ಸಿಎಎ ವಿರೋಧಿ ಪ್ರತಿಭಟನಕಾರರ ಮೇಲೆ ಸಿಎಎ ಬೆಂಬಲಿಗರು ದಾಳಿ ನಡೆಸಿದ್ದು, ಘಟನೆಯ ಫೋಟೊ, ವಿಡಿಯೋಗಳು ವೈರಲ್ ಆಗುತ್ತಿವೆ.

ಸಿಎಎ ಬೆಂಬಲಿಗರು ಎನ್ನಲಾದ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸುತ್ತಿರುವ ಫೋಟೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. Reuters ಪತ್ರಕರ್ತ ದಾನಿಶ್ ಸಿದ್ದಿಕಿ ಕ್ಯಾಮರಾದಲ್ಲಿ ಈ ಭಯಾನಕ ದಾಳಿಯ ದೃಶ್ಯ ಸೆರೆಯಾಗಿದೆ. ದಿಲ್ಲಿಯ ಚಾಂದ್ ಬಾಗ್ ನ ಭಜನ್ಪುರದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಬಿಳಿಬಟ್ಟೆ ಧರಿಸಿದ ವ್ಯಕ್ತಿಯೊಬ್ಬರನ್ನು ಸುತ್ತುವರಿದ ಗುಂಪು ದೊಣ್ಣೆಗಳಿಂದ ದಾಳಿ ನಡೆಸಿದೆ. ದಾಳಿಯ ಪರಿಣಾಮ ವ್ಯಕ್ತಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತ ಒಸರುತ್ತಿರುವ ದೃಶ್ಯವು ಈ ಚಿತ್ರದಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗುತ್ತಿದ್ದು,  ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಇಂದು ಸಿಎಎ ವಿರೋಧಿ ಹೋರಾಟಗಾರರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು ದಾಂಧಲೆ ನಡೆಸಿತ್ತು. ಅಂಗಡಿ , ವಾಹನಗಳಿಗೆ ಬೆಂಕಿ ಹಚ್ಚಿತ್ತು. ಈ ಹಿಂಸಾಚಾರದ ಪರಿಣಾಮ  ಪೊಲೀಸ್ ಸಿಬ್ಬಂದಿ ಸೇರಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News