ಅರೆಸೇನಾ ಪಡೆಯ ತರಬೇತಿ ವಾಹನಕ್ಕೆ ಕಾರು ಢಿಕ್ಕಿ: ಚಾಲಕನಿಗೆ ಗಂಭೀರ ಗಾಯ

Update: 2020-02-24 16:51 GMT

ಮೈಸೂರು,ಫೆ.24: ಕಾರು ಮತ್ತು ಅರೆಸೇನಾ ಪಡೆಯ ತರಬೇತಿ ವಾಹನದ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಕೆಆರ್ ಪುರ ವೃತ್ತದ ಬಳಿ ನಡೆದಿದೆ.

ಕಾರು ಅರೆಸೇನಾ ಪಡೆಯ ತರಬೇತಿ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತಕ್ಕೆ ಕಾರು ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಮೂರು ಜನರ ಪೈಕಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅರೆಸೇನಾ ಪಡೆಯ ತರಬೇತಿ ವಾಹನ ಮತ್ತು ಖಾಸಗಿ ವಾಹನವನ್ನು ದೊಡ್ಡ ಕವಲಂದೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯ ಪಿಎಸ್‍ಐ ಅಮ್ಮಜಾನ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖಾಸಗಿ ಕಾರಿನಲ್ಲಿದ್ದ ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News