ನವ ವಿವಾಹಿತೆ ಆತ್ಮಹತ್ಯೆ
Update: 2020-02-24 16:58 GMT
ಬೆಂಗಳೂರು, ಫೆ.24: ನವ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಗ್ಗೆರೆ ನಿವಾಸಿ ಭಾರತಿ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಳಿಗೆಯೊಂದಲ್ಲಿ ಕೆಲಸ ಮಾಡುವ ಸತೀಶ್ ಎಂಬುವರೊಂದಿಗೆ ಭಾರತಿ ವಿವಾಹವಾಗಿದ್ದು, ರವಿವಾರ ರಾತ್ರಿ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ರಾಜಗೋಪಾಲನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.