ದಿಲ್ಲಿಯಲ್ಲಿ ಹಿಂಸಾಚಾರ: ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

Update: 2020-02-26 10:19 GMT

ಹೊಸದಿಲ್ಲಿ: ಸಿಎಎ ವಿರೋಧಿ ಪ್ರತಿಭಟನಕಾರರ ಮೇಲೆ ಸಿಎಎ ಬೆಂಬಲಿಗರು ನಡೆಸಿದ ದಾಳಿ ಘಟನೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಂದು ನಡೆದ ಹಿಂಸಾಚಾರದಲ್ಲಿ ಕಲ್ಲುತೂರಾಟ ನಡೆದಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದರೆ, ತಲೆಗೆ ಗಾಯಗೊಂಡಿದ್ದ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ನಂತರ ವರದಿಯಾಗಿತ್ತು. ಇದೀಗ ಇನ್ನಿಬ್ಬರು ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News