ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಬರ್ಬರ ದಾಳಿ

Update: 2020-02-24 18:32 GMT

ಈಶಾನ್ಯ ದಿಲ್ಲಿಯ ಜಾಫ್ರಾಬಾದ್‌ನಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ಮೇಲೆ ಸಿಎಎ ಬೆಂಬಲಿಗರೆಂದು ಕರೆಸಿಕೊಂಡ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮವಾಗಿ ಹಿಂಸಾಚಾರ ಭುಗಿಲೆದ್ದಿದೆ. ಈಶಾನ್ಯ ದಿಲ್ಲಿಯ ಹಲವೆಡೆಗಳಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯ ಬೆಂಬಲಿಗರೆಂದು ಕರೆಸಿಕೊಂಡ ದುಷ್ಕರ್ಮಿಗಳು ನಡೆಸಿದ ಹಿಂಸಾಚಾರಕ್ಕೆ ಓರ್ವ ಹೆಡ್‌ಕಾನ್‌ಸ್ಟೇಬಲ್ ಹಾಗೂ ಮೂವರು ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor