ಫೆ.26ರಂದು ಅಂತರ್ಜಲ ವಿದ್ಯಾರ್ಥಿ ಜಾಗೃತಿ ಶಿಬಿರ

Update: 2020-02-25 13:50 GMT

ಉಡುಪಿ, ಫೆ.25: ಅಂತರ್ಜಲ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ಅಂತರ್ಜಲ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ಜಲ ಸದ್ಬಳಕೆ, ಸಂರಕ್ಷಣೆ, ಮರುಬಳಕೆ, ನಿರ್ವಹಣೆ, ಅತಿಬಳಕೆ, ಅಂತರ್ಜಲ ಮಾಲಿನ್ಯ ನಿಯಂತ್ರಣ ಹಾಗೂ ತೆರೆದ/ತ್ಯಕ್ತ ಕೊಳವೆ ಬಾವಿಗಳಲ್ಲಿ ಮಕ್ಕಳು ಬೀಳದಂತೆ ಜಾಗರೂಕತೆ ಕುರಿತು ಅಂತರ್ಜಲ ವಿದ್ಯಾರ್ಥಿ ಜಾಗೃತಿ ಶಿಬಿರ ಫೆ.26ರ ಬುಧವಾರ ಬೆಳಗ್ಗೆ 10 ಗಂಟೆಗೆ ಸಿದ್ಧಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಹಾಲಾಡಿ ಜಿಪಂ ಸದಸ್ಯ ಸಿದ್ಧಾಪುರದ ರೋಹಿತ್ ಶೆಟ್ಟಿ ಉದ್ಘಾಟಿಸಲಿದ್ದು, ಸಿದ್ಧಾಪುರ ಗ್ರಾಪಂ ಅಧ್ಯಕ್ಷೆ ಸರೋಜಿನಿ ಶೆಡ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News