ಫೆ.27ರಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಕ್ತದಾನ ಶಿಬಿರ

Update: 2020-02-25 16:36 GMT

ಉಡುಪಿ, ಫೆ.25: ಸ್ವಾತಂತ್ರವೀರ ಚಂದ್ರಶೇಖರ್ ಅಝಾದ್‌ರ ಬಲಿದಾನ ದಿನವಾದ ಫೆ.27ರಂದು ಬೆಳಗ್ಗೆ 9 ರಿಂದ ಅಪರಾಹ್ನ 1 ರವರೆಗೆ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸ್ವಯಂಪ್ರೇರಿತ ರ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಪಕ್ಷದ ಎಲ್ಲ ಕಾರ್ಯಕರ್ತರು ಇದರಲ್ಲಿ ಭಾಗವಹಿಸಬೇಕೆಂದು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಮತ್ತಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News