ಗ್ರಾ.ಪಂ. ಚುನಾವಣೆ ಹಿನ್ನೆಲೆ: ಎಸ್.ಡಿ.ಪಿ.ಐ. ಪೂರ್ವಭಾವಿ ಸಭೆ

Update: 2020-02-25 17:10 GMT

ಬಂಟ್ವಾಳ, ಫೆ.25: ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಕ್ಷದ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. 

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಗಳ ಚುನಾವಣೆಯ ಉಸ್ತುವಾರಿಯಾಗಿ ಎಸ್.ಡಿ.ಪಿ.ಐ. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಾಹುಲ್ ಹಮೀದ್ ಎಸ್.ಎಚ್. ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಯೂಸುಫ್ ಆಲಡ್ಕ, ಎಸ್.ಡಿ.ಪಿ.ಐ. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್., ಮುಖಂಡರಾದ ಝಕರಿಯ ಗೋಳ್ತಮಜಲು, ಸಲೀಂ ಕುಂಪನಮಜಲು, ಇಜಾಝ್ ಅಕ್ಕರಂಗಡಿ, ಮುನೀಶ್ ಅಲಿ ಬಂಟ್ವಾಳ, ಫೈಝಲ್ ಮಂಚಿ, ಸಲೀಂ ಆಲಾಡಿ, ಮಲ್ಲಿಕ್ ಕೊಳಕೆ, ಕಲಂದರ್ ಪರ್ತಿಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News