ಬಸ್ ದರ ಹೆಚ್ಚಳ: ರಾಜ್ಯ ಸರ್ಕಾರದ ಕ್ರಮಕ್ಕೆ ಕುಮಾರಸ್ವಾಮಿ ಖಂಡನೆ

Update: 2020-02-25 18:12 GMT

ಬೆಂಗಳೂರು, ಫೆ.25: ಏಕಾಏಕಿ ಬಸ್ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ಈಗಾಗಲೇ ಬೆಲೆ ಏರಿಕೆಯಿಂದಾಗಿ ದೈನಂದಿನ ಜೀವನ ನಿರ್ವಾಹಣೆ ಮಾಡುವುದು ದುಸ್ತರವಾಗಿರುವಾಗಲೇ ಬಸ್ ದರ ಹೆಚ್ಚಳ ಮಾಡುವ ಅಗತ್ಯವಾದರೂ ಇತ್ತೇ ಎಂದು ಪ್ರಶ್ನಿಸಿದ್ದಾರೆ. ಸಾರಿಗೆ ನಿಗಮಗಳು ನಷ್ಟದಲ್ಲಿರುವುದರಿಂದ ಸರಿದೂಗಿಸಲು ದರ ಹೆಚ್ಚಳ ಮಾಡಲಾಗಿದೆ ಎಂಬುದು ಸಮರ್ಥನಿಯ ಕಾರಣವಲ್ಲ. ಸಂಸ್ಥೆಗಳಲ್ಲಿ ಸೋರಿಕೆ ತಡೆಗಟ್ಟಲು ಸರ್ಕಾರ ಬಿಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.

ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ನಾಲ್ಕು ನಿಗಮಗಳ ಬಸ್ ದರ ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆ ಬಂದಿತ್ತು. ಆದರೆ, ಜನಸಾಮಾನ್ಯರಿಗೆ ಹೊರಯಾಗಬಾರದೆಂಬ ಕಾರಣಕ್ಕಾಗಿ ನಾನು ಇದಕ್ಕೆ ಅನುಮತಿ ನೀಡಿರಲಿಲ್ಲ. ಬಜೆಟ್ ಮಂಡನೆಗೂ ಮುನ್ನವೇ ಬಸ್ ದರ ಹೆಚ್ಚಳ ಮಾಡಿರುವುದನ್ನು ಗಮನಿಸಿದರೆ, ಈ ಬಾರಿ ಬಿಜೆಪಿ ಸರ್ಕಾರ ಅಯವ್ಯಯದಲ್ಲಿ 'ಬೆಲೆಏರಿಕೆ' ಉಡುಗೊರೆ ನೀಡುವ ಮುನ್ಸೂಚನೆ ನೀಡಿದೆ ಎಂದು ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News