ದಿಲ್ಲಿ: ಗುಪ್ತಚರ ಇಲಾಖೆ ಅಧಿಕಾರಿಯ ಮೃತದೇಹ ಚರಂಡಿಯಲ್ಲಿ ಪತ್ತೆ

Update: 2020-02-27 05:57 GMT

ಹೊಸದಿಲ್ಲಿ: ಹಿಂಸಾಚಾರಪೀಡಿತ ದಿಲ್ಲಿಯ ಜಾಫ್ರಾಬಾದ್ ನಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿಯೊಬ್ಬರ ಮೃತದೇಹ ಚರಂಡಿಯೊಂದರಲ್ಲಿ ಪತ್ತೆಯಾಗಿದೆ. ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಇದುವರೆಗೆ 21 ಮಂದಿ ಮೃತಪಟ್ಟಿದ್ದಾರೆ.

ತನ್ನ ಕೆಲಸ ಮುಗಿಸಿ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಚಾಂದ್ ಬಾಗ್ ನಲ್ಲಿ ಗುಪ್ತಚರ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ಅಂಕಿತ್ ಶರ್ಮಾರನ್ನು ಅಡ್ಡಗಟ್ಟಿ ಥಳಿಸಿ ಹತ್ಯೆಗೈದಿತ್ತು. ನಂತರ ಅವರ ಮೃತದೇಹವನ್ನು ಚರಂಡಿಗೆ ಎಸೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರದಿಂದ ಕುಟುಂಬಸ್ಥರು ಅಂಕಿತ್ ಶರ್ಮಾರಿಗಾಗಿ ಹುಡುಕಾಟ ನಡೆಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News