‘ಕ್ಯಾಸಿನೋ’ ಕೇಂದ್ರ ಸ್ಥಾಪಿಸುವ ಚಿಂತನೆಯೇ ಇಲ್ಲ: ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸ್ಪಷ್ಟನೆ

Update: 2020-02-26 12:17 GMT

ಬೆಂಗಳೂರು, ಫೆ. 26: ರಾಜ್ಯದಲ್ಲಿ ‘ಕ್ಯಾಸಿನೋ’(ಜೂಜು) ಕೇಂದ್ರಗಳನ್ನು ಸ್ಥಾಪಿಸಲು ಚಿಂತನೆಯೇ ಇಲ್ಲ. ಹೀಗಿರುವಾಗ ಜಾರಿಗೆ ತರುವ ಮಾತು ಎಲ್ಲಿಯದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಎಫ್‌ಕೆಸಿಸಿಐನಲ್ಲಿ ನಡೆದ ಪ್ರವಾಸೋದ್ಯಮ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಕೇಳಲಾದ ಪ್ರಶ್ನೆಗೆ ನಾನು ಪ್ರತಿಕ್ರಿಯಿಸಿದ್ದೆ. ಅದೇ ವೇದಿಕೆಯಲ್ಲಿ ಕ್ಯಾಸಿನೋ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದೆ. ಆದರೂ, ಕೆಲವರು ಈ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದು, ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ನಾನು ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. ಕ್ಯಾಸಿನೋ ಕೇಂದ್ರ ಸ್ಥಾಪಿಸಲು ಉದ್ದೇಶ ಸರಕಾರಕ್ಕೆ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News