ದೊರೆಸ್ವಾಮಿ ಬಗ್ಗೆ ಶಾಸಕ ಯತ್ನಾಳ್ ಅವಹೇಳನಕಾರಿ ಹೇಳಿಕೆಗೆ ಕುಮಾರಸ್ವಾಮಿ ಕಿಡಿ
Update: 2020-02-26 12:19 GMT
ಬೆಂಗಳೂರು, ಫೆ. 26: ‘ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀಜಿಯ ಒಡನಾಡಿಯಾಗಿದ್ದ ಎಚ್.ಎಸ್.ದೊರೆಸ್ವಾಮಿಯವರಿಗೆ ಅವಹೇಳನಕಾರಿ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಖಂಡನೀಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಎಂತಹ ಚೋದ್ಯ’ ಎಂದು ಲೇವಡಿ ಮಾಡಿದ್ದಾರೆ.