ಮಹದಾಯಿ: ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಮನವಿ

Update: 2020-02-26 14:21 GMT

ಹೊಸದಿಲ್ಲಿ, ಫೆ. 26: ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ ನಡೆಸಿದರು.

ಬುಧವಾರ ದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ, ಶೀಘ್ರದಲ್ಲೆ ಅಧಿಸೂಚನೆ ಹೊರಡಿಸಬೇಕೆಂದು ಕೋರಿದರು.

ಫೆ.20ಕ್ಕೆ ಮಹಾದಾಯಿ ವಿಚಾರವಾಗಿ, ಸುಪ್ರೀಂ ಕೋರ್ಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು. ಈ ಮಧ್ಯೆ ಗೋವಾ ಸರಕಾರ, ಸುಪ್ರೀಂ ಕೋರ್ಟ್‌ಗೆ ಆದೇಶ ಮರು ಪರಿಶೀಲನೆ ಮಾಡುವಂತೆ ಕೋರಲು ಸಿದ್ದತೆ ನಡೆಸಿದೆ ಎಂದು ಗೊತ್ತಾಗಿದೆ. ಹೀಗಾಗಿ ಕೂಡಲೇ ಕೇಂದ್ರ ಗೆಜೆಟ್ ಅಧಿಸೂಚನೆ ಹೊರಡಿಸಬೇಕೆಂದು ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News