ಎಲಿವೇಟೆಡ್ ಕಾರಿಡಾರ್: ಬಿಜೆಪಿ ವಿರುದ್ಧ ಆಮ್ ಆದ್ಮಿ ಪ್ರತಿಭಟನೆ

Update: 2020-02-26 16:45 GMT

ಬೆಂಗಳೂರು, ಫೆ.26: ಎಲಿವೇಟೆಡ್ ಕಾರಿಡಾರ್ ಜಾರಿಗೆ ಮುಂದಾಗಿರುವ ಬಿಜೆಪಿ ಸಚಿವರು ಹಾಗೂ ಶಾಸಕರ ನಡೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಟೌನ್‌ಹಾಲ್ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಸರಕಾರಗಳು ನೂತನವಾಗಿ ರಚನೆಯಾದಾಗಲೆಲ್ಲ ಅಥವಾ ಪ್ರತಿವರ್ಷ ಬಜೆಟ್ ಮಂಡನೆಯಾಗುವ ಹೊಸ್ತಿಲಿನಲ್ಲಿ ಎಲಿವೇಟೆಡ್ ಕಾರಿಡಾರ್ ವಿಚಾರ ಚಾಲ್ತಿಗೆ ಬರುತ್ತದೆ. ಇದು ಮಂತ್ರಿಗಳು ಹಾಗೂ ಅಧಿಕಾರಿಗಳ ಸಮ್ಮುಖ ಸಭೆಗಳಲ್ಲಿ ಪ್ರತ್ಯಕ್ಷವಾಗಿ ಸಾವಿರಾರು ಕೋಟಿ ರೂ.ಗಳ ಅನುದಾನವೆಂಬ ಮಹಾ ಮೋಸಕ್ಕೆ ಇಂಬು ನೀಡುತ್ತಿದೆ ಎಂದು ಆರೋಪಿಸಿದರು.

ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಜನತೆ ಸಂಚಾರ ಸಮಸ್ಯೆಗಳಿಂದ ಇಕ್ಕಟ್ಟಿಗೆ ಸಿಲುಕಿ ಪಡಬಾರದ ಪಡಿಪಾಟಲು ಪಡುತ್ತಿದ್ದಾರೆ. ನಗರದಲ್ಲಿರುವ ಜ್ವಲಂತ ಸಮಸ್ಯೆಯನ್ನು ಅಧಿಕಾರಸ್ಥರು ಸರಕಾರದ ಖಜಾನೆ ಕೊಳ್ಳೆಹೊಡೆಯುವ ಮಾರ್ಗವನ್ನಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News