ಪಡುಬಿದ್ರಿ: ವಿಷಸೇವಿಸಿ ವೃದ್ಧ ಆತ್ಮಹತ್ಯೆ

Update: 2020-02-26 17:22 GMT

ಪಡುಬಿದ್ರಿ, ಫೆ.26: ಹೆಜಮಾಡಿ ಗ್ರಾಮದ ಅಚ್ಚುತ ಆಚಾರ್ಯ(68) ಎಂಬವರು ಬಹುಕಾಲದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.17ರಂದು ವಿಷಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಮಣಿಪಾಲದ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತಿದ್ದರು.

ಆದರೆ ಮಂಗಳವಾರ ರಾತರಿ 11:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News