ಸಂಗೀತ ನಿರ್ದೇಶಕ ಅರ್ಜುನ್ ಜನ್ಯರಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
Update: 2020-02-27 05:27 GMT
ಮೈಸೂರಿನ, ಫೆ.27: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿನ ಬೋಗಾದಿಯಲ್ಲಿರುವ ತನ್ನ ನಿವಾಸದಲ್ಲಿ ಬುಧವಾರ ತಂಗಿದ್ದ ಅವರಿಗೆ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿತೆನ್ನಲಾಗಿದೆ. ಕೂಡಲೇ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರ್ಜುನ್ ಜನ್ಯರಿಗೆ ಲಘು ಹೃದಯಾಘಾತವಾಗಿರುವ ಬಗ್ಗೆ ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿದ್ದು, ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಆರೋಗ್ಯ ಸುಧಾರಿಸಿದೆ. ಸದ್ಯ ಅವರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್ಗೆ ವರ್ಗಾಯಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಹೆಸರಾಂತ ಸಂಗೀತ ನಿರ್ದೇಶಕರಾಗಿರುವ ಅವರು ಹಲವು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.