ಭಟ್ಕಳ: ದೆಹಲಿ ಹಿಂಸಾಚಾರದ ವಿರುದ್ಧ ಎಸ್.ಡಿ.ಪಿ.ಐ. ಪ್ರತಿಭಟನೆ

Update: 2020-02-27 07:43 GMT

ಭಟ್ಕಳ, ಫೆ.27: ಎನ್‌ಆರ್‌ಸಿ, ಎನ್‌ಪಿಆರ್ ಮತ್ತು ಸಿಎಎ ವಿರೋದಿ ಪ್ರತಿಭಟನಾಕಾರರ ಮೇಲೆ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ, ಹಲ್ಲೆ ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಬುಧವಾರ ಇಲ್ಲಿನ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾಧ್ಯಕ್ಷ ತೌಫೀಕ್ ಬ್ಯಾರಿ ಮಾತನಾಡ, ರಾಷ್ಟ್ರ ರಾಜಧಾನಿಯಲ್ಲಿನ ಹಿಂಸಾಚಾರದ ಹಿಂದೆ ಸಂಘ ಪರಿವಾರವಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದರು.

ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News