ಉಡುಪಿ: ತಂಬಾಕು ನಿಯಂತ್ರಣ ತನಿಖಾ ದಳದಿಂದ ವಿವಿಧೆಡೆ ದಾಳಿ

Update: 2020-02-27 15:41 GMT

ಉಡುಪಿ, ಫೆ.27: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಗುರುವಾರ ತಾಲೂಕಿನ ಕೊಕ್ಕರ್ಣೆ ಮತ್ತು ಹೇರೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೊಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ 36 ಪ್ರಕರಣಗಳನ್ನು ದಾಖಲಿಸಿ 7000ರೂ. ದಂಡ ವಸೂಲಿ ಮಾಡಲಾಯಿತು.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ, ಕೊಕ್ಕರ್ಣೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುರೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಮೇಲ್ವಿಚಾರಕ ಆನಂದ ಗೌಡ, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಎನ್‌ಟಿಸಿಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶ್ಯಾಮನೂರ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News