ಮಾಣಿ: ಫೆ.28ರಂದು ಸಿಎಎ ವಿರುದ್ಧ ಪ್ರತಿಭಟನಾ ಸಮಾವೇಶ
Update: 2020-02-27 16:26 GMT
ಬಂಟ್ವಾಳ, ಫೆ. 27: ಸಂವಿಧಾನ ಸಂರಕ್ಷಣಾ ಸಮಿತಿ ಮಾಣಿಯ ವತಿಯಿಂದ ಸಿಎಎ, ಎನ್.ಆರ್.ಸಿ., ಎನ್.ಪಿ.ಆರ್.ಯನ್ನು ವಿರೋಧಿಸಿ ಮಾಣಿಯ ಗಾಂಧಿ ಮೈದಾನದಲ್ಲಿ ಫೆ.28ರಂದು ಅಪರಾಹ್ನ 2:30ಕ್ಕೆ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನಾ ಸಮಾವೇಶದಲ್ಲಿ ಸುದ್ದಿ ಟಿವಿ ಸಂಪಾದಕ ಶಶಿಧರ್ ಭಟ್, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್, ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಆರ್.ಬಾಸ್ಕರ್ ಪ್ರಸಾದ್, ಮೈಸೂರು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ವಿವಿಧ ಸಂಘಟನೆ, ಪಕ್ಷಗಳ ನಾಯಕರಾದ ಎಂ.ಬಿ.ಸದಾಶಿವ ಸುಳ್ಯ, ಅಝೀಝ್ ದಾರಿಮಿ ಚೊಕ್ಕಬೆಟ್ಟು, ಯಾಕುಬ್ ಸಅದಿ, ನೇಮಿ ಚಂದ್ರ, ವಕೀಲ ಅಮೀನ್ ಮೊಹ್ಸೀನ್, ಹನೀಫ್ ಖಾನ್ ಕೊಡಾಜೆ, ಸುದೀಪ್ ಕುಮಾರ್ ಶೆಟ್ಟಿ ಮಾಣಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.