ಫೆ.28: ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರ ಪ್ರವಾಸ

Update: 2020-02-27 17:15 GMT

ಮಂಗಳೂರು, ಫೆ.27: ಪ್ರಾಥಮಿಕ ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಫೆ.28 ರಂದು ರಾತ್ರಿ 8:30ಕ್ಕೆ ಗಂಜಿಮಠದಲ್ಲಿ ನಡೆಯಲಿರುವ ಶತಚಂಡಿಕಾಯಾಗ ಹಾಗೂ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 11ಕ್ಕೆ ಸುಳ್ಯಕ್ಕೆ ತೆರಳಿ ವಾಸ್ತವ್ಯ ಹೂಡುವರು.

ಫೆ.29ರಂದು ಬೆಳಗ್ಗೆ 8ಕ್ಕೆ ರಸ್ತೆ ಮೂಲಕ ಮಡಿಕೇರಿಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News