ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಕೇಜ್ರಿವಾಲ್

Update: 2020-02-27 17:40 GMT

ಹೊಸದಿಲ್ಲಿ, ಫೆ. 27: ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಬಲಿಯಾದವರ ಕಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಘೋಷಿಸಿದ್ದಾರೆ.

 ಹಿಂಸಾಚಾರದಲ್ಲಿ ಗಾಯಗೊಂಡವರ ಹಾಗೂ ಆಸ್ಪತ್ರೆಯಲ್ಲಿ ದಾಖಲಾದವರ ಚಿಕಿತ್ಸೆಯ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಗಂಭೀರ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು. ಹಿಂಸಾಚಾರದ ಸಂದರ್ಭ ನಾಶವಾದ ದಾಖಲೆಗಳನ್ನು ಪಡೆಯಲು ವಿಶೇಷ ಶಿಬಿರಗಳನ್ನು ಆರಂಭಿಸಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News