ಜಮ್ಮುವಿನಲ್ಲಿ ಉಗ್ರರ ಜೊತೆ ಗುಂಡಿನ ಕಾಳಗ: ರಾಜ್ಯದ ಹುತಾತ್ಮ ಯೋಧನಿಗೆ ಮುಖ್ಯಮಂತ್ರಿ ಸಂತಾಪ

Update: 2020-02-27 17:49 GMT

ಬೆಂಗಳೂರು, ಫೆ. 27: ಜಮ್ಮುವಿನಲ್ಲಿ ಉಗ್ರರ ಜತೆ ನಡೆದ ಗುಂಡಿನ ಕಾಳಗದಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಗ್ರಾಮದ ಯೋಧ ಪ್ರಶಾಂತ್ ಅವರು ಹುತಾತ್ಮರಾಗಿದ್ದು, ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. 

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ದೇಶಕ್ಕಾಗಿ ವೀರಮರಣವನ್ನಪ್ಪಿದ ಪ್ರಶಾಂತ್ ಅವರ ಆತ್ಮಕ್ಕೆ ಭಗವಂತನು ಶಾಂತಿ ನೀಡಲಿ, ಅವರ ಕುಟುಂಬದ ಸದಸ್ಯರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News