ಬಸ್ ಪ್ರಯಾಣ ದರ ಇಳಿಕೆಗೆ ಸಚಿವ ಎಸ್.ಟಿ.ಸೋಮಶೇಖರ್ ಮನವಿ
Update: 2020-02-28 14:40 GMT
ಬೆಂಗಳೂರು, ಫೆ. 28: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಪರೋಕ್ಷ ಆಕ್ಷೇಪ ವ್ಯಕ್ತಪಡಿಸಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಬಸ್ ದರ ಇಳಿಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.
ಬಸ್ ಪ್ರಯಾಣಿಕರ ವೇದಿಕೆ ತನಗೆ ಬಸ್ ಪ್ರಯಾಣ ದರ ಇಳಿಕೆ ಮತ್ತು ಸರಕಾರಿ ಬಸ್ಗಳನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿತ್ತು. ಆ ಹಿನ್ನೆಲೆಯಲ್ಲಿ ಸರಕಾರ ಈ ವಿಚಾರದ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಪತ್ರದಲ್ಲಿ ಸೋಮಶೇಖರ್ ಕೋರಿದ್ದಾರೆ.