ಹೊಸಂಗಡಿ : ತಲವಾರು ತೋರಿಸಿ ಪೊಲೀಸ್ ಸಿಬ್ಬಂದಿಗೆ ಬೆದರಿಕೆ ; ದೂರು

Update: 2020-02-28 16:20 GMT

ಅಮಾಸೆಬೈಲು, ಫೆ.28: ವ್ಯಕ್ತಿಯೋರ್ವ ಸಾರ್ವಜನಿಕವಾಗಿ ಪೊಲೀಸ್ ಸಿಬ್ಬಂದಿಗೆ ತಲವಾರು ತೋರಿಸಿ, ಜೀವ ಬೆದರಿಕೆಯೊಡ್ಡಿ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಗುರುವಾರ ಸಂಜೆ ಹೊಸಂಗಡಿ ಗ್ರಾಮದ ಕೆಪಿಸಿ ಚೆಕ್‌ಪೋಸ್ಟ್ ಬಳಿ ನಡೆದಿದೆ.

ಹೊಸಂಗಡಿ ಚೆಕ್‌ಪೋಸ್ಟ್ ಬಳಿಯ ನಿವಾಸಿ ಜಯಪ್ರಕಾಶ ಶೆಟ್ಟಿ(44) ಎಂಬಾತ ಕೈಯಲ್ಲಿ ಕಬ್ಬಿಣದ ತಲವಾರು ಹಿಡಿದುಕೊಂಡು ತಿರುಗಾಡುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಅಮಾಸೆಬೈಲು ಪೊಲೀಸ್ ಠಾಣಾ ಸಿಬ್ಬಂದಿಯವರು ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ವರ್ತಿಸುವುದು ಸರಿಯಲ್ಲ ಎಂದು ಬುದ್ಧಿವಾದ ಹೇಳಿದರು.

ಇದಕ್ಕೆ ಜಯಪ್ರಕಾಶ್ ಶೆಟ್ಟಿ ಪೊಲೀಸರಿಗೆ ಅವಾಚ್ಯವಾಗಿ ಬೈದು ತಲವಾರನ್ನು ತೋರಿಸಿ ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಲು ಯತ್ನಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News