ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಡಾ. ಯಂ.ಜಿ. ನಾಯಕ್

Update: 2020-02-28 17:17 GMT

ಪುತ್ತೂರು : ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.

ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News