ಕಲಬುರಗಿ: ಮಾಜಿ ಸಚಿವರ ಸಹೋದರನ ಮಗನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ
Update: 2020-02-29 05:43 GMT
ಕಲಬುರಗಿ: ಜಿಲ್ಲೆಯ ಶಹಾಬಾದ ಪಟ್ಟಣದಲ್ಲಿ ಮಾಜಿ ಸಚಿವ ಸಿ. ಗುರುನಾಥ ಅವರ ಸಹೋದರನ (ಅಣ್ಣ) ಮಗ ಸತೀಶ ಕಂಬಾನೋರ (42) ರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಶಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಶಂಕರವಾಡಿ ರಘೋಜಿ ಫ್ಯಾಕ್ಟರಿ ಬಳಿ ಮೃತದೇಹ ಪತ್ತೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಕೆಲವು ದಿನಗಳ ಹಿಂದೆ ಇವರ ಕಿರಿಯ ಸಹೋದರ ಶಹಾಬಾದ ನಗರ ಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೋರ ಅವರ ಮೇಲೆಯೂ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಶಹಬಾದ್ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.