ಮಂಗಳಮುಖಿ ನಿಗೂಢ ಸಾವು

Update: 2020-03-01 13:25 GMT

ಬೆಂಗಳೂರು, ಮಾ.1: ಮಂಗಳಮುಖಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೌತಮ್ ಯಾನೆ ರಮ್ಯಾ ಎಂಬಾಕೆ ಮೃತ ಮಂಗಳಮುಖಿ ಎಂದು ಪೊಲೀಸರು ಗುರುತಿಸಿದ್ದಾರೆ.

ಕೆ.ಪಿ.ಅಗ್ರಹಾರದ ಟೆಂಟ್‌ರೋಡ್ ಬಳಿಯ ಮನೆಯೊಂದರಲ್ಲಿ ಹದಿನೈದು ವರ್ಷಗಳಿಂದ ವಾಸವಾಗಿದ್ದ ಗೌತಮ್, ಇತ್ತೀಚಿಗಷ್ಟೇ, ಮಂಗಳಮುಖಿಯಾಗಿ ಪರಿವರ್ತನೆಯಾಗಿ ಒಂಟಿಯಾಗಿ ನೆಲೆಸಿದ್ದರು ಹೇಳಲಾಗುತ್ತಿದೆ. ಸ್ಥಳೀಯರೊಂದಿಗೆ ಸಂಪರ್ಕ ಇಲ್ಲದ ಕಾರಣ, ಯಾರೂ ಅವರ ಜೊತೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ.

ಎರಡು ದಿನಗಳಿಂದ ಮನೆಯಲ್ಲಿ ರ್ದುವಾಸನೆ ಬಂದ ಹಿನ್ನೆಲೆ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಗೆ ತೆರಳಿದ ಪೊಲೀಸರು ಪರಿಶೀಲನೆ ಮಾಡಿದಾಗ, ಗೌತಮ್ ಮೃತ ದೇಹ ಪತ್ತೆಯಾಗಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಕೆಪಿ ಅಗ್ರಹಾರ ಠಾಣಾ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News