ಶೀಘ್ರದಲ್ಲೇ ಖಾಲಿಯಿರುವ ಹುದ್ದೆಗಳ ನೇಮಕ ಪ್ರಕ್ರಿಯೆ: ಸಚಿವ ಜಗದೀಶ್ ಶೆಟ್ಟರ್

Update: 2020-03-01 14:43 GMT

ಹುಬ್ಬಳ್ಳಿ, ಮಾ.1: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿಯಿರುವ 2500 ಚಾಲಕ, ನಿರ್ವಾಹಕ ಹುದ್ದೆಗಳ ನೇಮಕಕ್ಕೆ ಸರಕಾರದಿಂದ ಅನುಮತಿ ಸಿಕ್ಕಿದ್ದು, ಶೀಘ್ರದಲ್ಲೇ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ನಗರದಲ್ಲಿಂದು ಸಂಸ್ಥೆಯ 23ನೆ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಯವ್ಯ ಸಾರಿಗೆ ಸಂಸ್ಥೆಗೆ ಮುಂದಿನ ಐದು ವರ್ಷ ವಾಹನ ತೆರಿಗೆ ವಿನಾಯಿತಿ ನೀಡುವಂತೆ ಹಾಗೂ ವಿದ್ಯಾರ್ಥಿ ಬಸ್‌ಪಾಸ್‌ಗೆ ಸಂಬಂಧಿಸಿದಂತೆ ಸರಕಾರದಿಂದ ಬರಬೇಕಿರುವ 722 ಕೋಟಿ ರೂ. ಹಣವನ್ನು ನೀಡುವಂತೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಬಸ್ ಚಾಲಕರು, ನಿರ್ವಾಹಕರು ಹಾಗು ಸಂಸ್ಥೆಯ ಸಿಬ್ಬಂದಿ ಪ್ರಾಮಾಣಿಕತೆ ಯಿಂದ ಕಾರ್ಯನಿರ್ವಹಿಸಿ, ಸಂಸ್ಥೆಯ ಬಲವರ್ಧನೆಗೆ ಶ್ರಮಿಸಬೇಕು ಎಂದು ಇದೇ ವೇಳೆ ಅವರು ನುಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಎಂ.ಡಿ.ರಾಜೇಂದ್ರ ಚೋಳನ್ ಇದ್ದರು. ಅಪಘಾತ ರಹಿತ ಬಸ್ ಚಾಲನೆ ಮಾಡಿದ ಚಾಲಕರಿಗೆ ಬೆಳ್ಳಿ ಪದಕ, ಅಂತರ್ ವಿಭಾಗೀಯ ಕ್ರೀಡಾ ಮತ್ತು ಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News