ದ್ವೇಷ ರಾಜಕಾರಣಕ್ಕೆ ಕಡಿವಾಣ ಹಾಕಬೇಕು: ನಿಖಿಲ್ ಕುಮಾರಸ್ವಾಮಿ

Update: 2020-03-01 17:37 GMT

ಮಂಡ್ಯ, ಮಾ.1: ಮಂಡ್ಯದಲ್ಲಿ ದ್ವೇಷದ ರಾಜಕಾರಣ ಜಾಸ್ತಿ ಆಗಿದ್ದು, ಈ ರೀತಿ ಮಾಡುವುದು ತಪ್ಪು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ನಡೆದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಆದಾಗ ಅವರ ಪರ ನಿಲ್ಲುವುದು ನಮ್ಮ ಜವಾಬ್ದಾರಿ ಎಂದರು.

ಎಪ್ರಿಲ್ 17ಕ್ಕೆ ನನ್ನ ಮದುವೆ ನಿಶ್ಚಯವಾಗಿದೆ. ಮಂಡ್ಯ, ರಾಮನಗರ ಜನತೆ ಜತೆ ನನಗೆ ಒಡನಾಟ ಜಾಸ್ತಿ ಇದೆ. ಆದ್ದರಿಂದ ಎರಡು ಜಿಲ್ಲೆಗಳ ಜನರಿಗೂ ಮದುವೆ ಆಹ್ವಾನ ನೀಡುತ್ತೇವೆ ಎಂದು ಅವರು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News