ನಿರ್ಭಯಾ ಪ್ರಕರಣ: ಆರೋಪಿಗಳ ಗಲ್ಲು ಶಿಕ್ಷೆ ಮತ್ತೊಮ್ಮೆ ಮುಂದೂಡಿಕೆ
Update: 2020-03-02 12:52 GMT
ಹೊಸದಿಲ್ಲಿ: ದೇಶದ ಗಮನ ಸೆಳೆದಿದ್ದ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳ ಗಲ್ಲು ಶಿಕ್ಷೆ ಆದೇಶಕ್ಕೆ ಮತ್ತೊಮ್ಮೆ ತಡೆ ಬಿದ್ದಿದ್ದು, ಮಾ.3 ರಂದು ನಿಗದಿಯಾಗಿದ್ದ ಗಲ್ಲು ಶಿಕ್ಷೆಯನ್ನು ದಿಲ್ಲಿ ನ್ಯಾಯಾಲಯ ಸೋಮವಾರ ಮುಂದೂಡಿದೆ.
ಈ ಹಿಂದೆ ದಿಲ್ಲಿ ಹೈಕೋರ್ಟ್ ಮಾರ್ಚ್ 3ಕ್ಕೆ ನಿರ್ಭಯಾ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಆದರೆ ಇಂದು ದಿಲ್ಲಿ ನ್ಯಾಯಾಲಯ ಈ ಆದೇಶಕ್ಕೆ ತಡೆ ನೀಡಿದ್ದು, 'ಆರೋಪಿ ಪವನ್ ಕುಮಾರ್ ಗುಪ್ತಾ ಅವರ ಕ್ಷಮಾದಾನ ಅರ್ಜಿಯನ್ನು ವಿಲೇವಾರಿ ಮಾಡಲು ಬಾಕಿ ಇರುವುದರಿಂದ ಮರಣದಂಡನೆ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ತಿಳಿಸಿದ್ದಾರೆ.
ಮರಣದಂಡನೆಯನ್ನು ತಡೆಹಿಡಿಯಬೇಕೆಂದು ಕೋರಿರುವ ಪವನ್ ಅವರು ಸೋಮವಾರ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದರಿಂದ ನ್ಯಾಯಾಲಯವು ಈ ಆದೇಶವನ್ನು ಜಾರಿಗೊಳಿಸಿತು.