ಆರ್ದ್ರಾ ಜಾಮೀನು ಅರ್ಜಿ ವಿಚಾರಣೆ ಮಾ.3ಕ್ಕೆ ಮುಂದೂಡಿದ ಕೋರ್ಟ್

Update: 2020-03-02 16:25 GMT

ಬೆಂಗಳೂರು, ಮಾ.2: ನಗರದ ಪುರಭವನದ ಮುಂಭಾಗ ಫ್ರೀ ಕಾಶ್ಮೀರ ಭಿತ್ತಿ ಪತ್ರ ಪ್ರದರ್ಶಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರ್ದ್ರಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ 6ನೆ ಎಸಿಎಂಎಂ ಕೋರ್ಟ್ ಮಾ.3 ಕ್ಕೆ ಮುಂದೂಡಿದೆ.

ಆಕ್ಷೇಪಾರ್ಹ ಭಿತ್ತಿ ಪತ್ರ ಪ್ರದರ್ಶಿಸಿದ ಪ್ರಕರಣದ ಆರೋಪಿ ಆರ್ದ್ರಾ ಜಾಮೀನು ಅರ್ಜಿಯನ್ನು ನಗರದ 6ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದರು. ಇದಕ್ಕೂ ಮುನ್ನ ಅರ್ಜಿಯಲ್ಲಿ ತಮ್ಮನ್ನು ಕೂಡ ಪ್ರಾಸಿಕ್ಯೂಷನ್ ಜೊತೆ ಸೇರಿಸಿಕೊಳ್ಳಬೇಕು ಎಂದು ಕೋರಿ ಶ್ರೀರಾಮ ಸೇನೆ ಸಂಘಟನೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಸೆಕ್ಷನ್ 301ರ ಅಡಿ ಸಲ್ಲಿಸಿರುವ 'ಅಸಿಸ್ಟ್ ಟೂ ಪ್ರಾಸಿಕ್ಯೂಷನ್’ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವ ಕುರಿತು ಮಂಗಳವಾರ ನಿರ್ಣಯಿಸುವುದಾಗಿ ತಿಳಿಸಿತು.

ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ವಿರುದ್ಧ ಪುರಭವನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ್ದ ಆರ್ದ್ರಾ ಪ್ರತಿಭಟನಾಕಾರರ ಹಿಂದೆ ನಿಂತು ಫ್ರೀ ಕಾಶ್ಮೀರ ಭಿತ್ತಿ ಪತ್ರ ಪ್ರದರ್ಶಿಸಿದ್ದಳು. ಕೂಡಲೇ ಈಕೆಯನ್ನು ವಶಕ್ಕೆ ತೆಗೆದುಕೊಂಡಿದ್ದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಆರ್ದ್ರಾ ವಿರುದ್ಧ ದೇಶದ್ರೋಹ ಆರೋಪದಡಿ ಪ್ರಕರಣ ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News