‘ನಮ್ಮನ್ನು ಕತ್ತಲೆಯಲ್ಲಿಟ್ಟರು’: ಅಸಮಾಧಾನ ವ್ಯಕ್ತಪಡಿಸಿದ ಎ.ಟಿ.ರಾಮಸ್ವಾಮಿ

Update: 2020-03-03 13:19 GMT

ಬೆಂಗಳೂರು, ಮಾ.3: ಸದನ ನಡೆಯಲಿದೆ ಅಥವಾ ನಡೆಯಲ್ಲ ಎನ್ನುವ ಯಾವುದೇ ಮಾಹಿತಿ ಇಲ್ಲದೆ, ನಮ್ಮನ್ನು ಕತ್ತಲೆಯಲ್ಲಿಟ್ಟರು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ದೊರೆಸ್ವಾಮಿ ಅವರ ಕುರಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರಸ್ತಾಪಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಾಲೆ ಪ್ರಾರಂಭ ಆಗಲು ಒಂದು ಸಮಯ ನಿಗದಿ ಮಾಡಲಾಗಿದೆ. ಇದನ್ನು ಉಲ್ಲಂಘಿಸಿದರೆ, ಕ್ರಮ ಕೈಗೊಳ್ಳುತ್ತಾರೆ. ಆದರೆ, ಇಲ್ಲಿ ಸೂಕ್ತ ವೇಳೆಗೆ ಸದನ ನಡೆದಿಲ್ಲ. ಇನ್ನೂ ಯಾವುದೇ ಮಾಹಿತಿ ನೀಡದೆ ನಮ್ಮನ್ನು ಕತ್ತಲ್ಲಿನಲ್ಲಿಯೇ ಇಡಲಾಗಿದೆ. ಹೀಗೆ ಎಂದೂ ಆಗಬಾರದು ಎಂದು ಪರೋಕ್ಷವಾಗಿ ಸ್ಪೀಕರ್ ವಿರುದ್ಧ ಬೇಸರ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News