ಮಂಗಳೂರು: ನದಿಗೆ ಹಾರಿ ಯುವಕ ಆತ್ಮಹತ್ಯೆ

Update: 2020-03-05 16:51 GMT

ಮಂಗಳೂರು, ಮಾ.5: ಪಲ್ಗುಣಿ ನದಿಗೆ ಹಾರಿ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಮೂಡುಶೆಡ್ಡೆಯ ಪ್ರಭಾಕರ (22) ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಈತ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ.

ಸಿಸಿ ಕೆಮರಾ ಮತ್ತಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ರಿಪೇರಿ ಮಾಡುತ್ತಿದ್ದ ಈತ, ಗುರುವಾರ ಸಂಜೆ ದಿಢೀರನೆ ನದಿ ದಡಕ್ಕೆ ತೆರಳಿ ನದಿಗೆ ಹಾರಿದ್ದನು. ಈ ಸಂದರ್ಭ ಸಮೀಪದಲ್ಲಿದ್ದ ಕೆಲವರು ಗಮನಿಸಿದ್ದು, ಕೂಡಲೇ ಅವರನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದರು.

ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News