ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಿಜೆಪಿ ಮುಖಂಡನ ಹತ್ಯೆ

Update: 2020-03-06 05:15 GMT

ಮೈಸೂರು, ಮಾ.6: ಹುಟ್ಟುಹಬ್ಬದ ಸಂಭ್ರಮಾಚರಣೆಯ ಸಂದರ್ಭ ಬಿಜೆಪಿ ಮುಖಂಡನೋರ್ವನನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆಗೈದ ಘಟನೆ ಕುವೆಂಪು ನಗರದ ಸರ್ವೀಸ್ ಅಪಾರ್ಟ್‌ಮೆಂಟ್‌ನಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಸ್ಥಳೀಯ ಬಿಜೆಪಿ ಮುಖಂಡ ಆನಂದ್ ವಡ್ಡ ಆನಂದ್ ಕೊಲೆಯಾದವರು. ಇವರನ್ನು ನಗರದ ಕುವೆಂಪು ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಗುರುವಾರ ತಡರಾತ್ರಿ ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂದ್ ಅವರು ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದರೆನ್ನಲಾಗಿದೆ. ಈ ವೇಳೆ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದ್ದು, ಕುಡಿಯುತ್ತಿದ್ದ ಬಿಯರ್ ಬಾಟಲಿಯಿಂದಲೇ ಚುಚ್ಚಿ ಆನಂದ್ ರನ್ನು ಕೊಲೆ ಮಾಡಲಾಗಿದೆ.

ಆನಂದ್ ರಿಯಲ್ ಎಸ್ಟೇಟ್ ಬಡ್ಡಿ ವ್ಯವಹಾರ ಮಾಡುತ್ತಿದ್ದರೆನ್ನಲಾಗಿದೆ. ಈ ಹಳೇ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸರಸ್ವತಿಪುರಂ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News