ಕೊಲೆ ಯತ್ನ ಪ್ರಕರಣ: ಗೃಹ ಸಚಿವರಿಗೆ ಪತ್ರ ಬರೆದ ಶಾಸಕ ತನ್ವೀರ್ ಸೇಠ್

Update: 2020-03-06 17:17 GMT

ಮೈಸೂರು,ಮಾ.6: ತಮ್ಮ ಮೇಲೆ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಿಧಾನಗತಿಯಲ್ಲಿ ನಡೆಯುತ್ತಿರುವುದಕ್ಕೆ ಶಾಸತ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಗೃಹ ಸಚಿವ ಬಸವರಾಜು ಬೊಮ್ಮಾಯಿಗೆ ಪತ್ರ ಬರೆದಿರುವ ಶಾಸಕ ತನ್ವೀರ್ ಸೇಠ್, ಈ ಪ್ರಕರಣದ ಆರೋಪಿಯನ್ನ ಈಗಾಗಲೇ ಬಂಧಿಸಲಾಗಿದೆ. ಆದರೂ ತನಿಖೆ ಮಾತ್ರ ನಿಧಾನಗತಿಯಲ್ಲಿ ನಡೆಯುತ್ತಿದೆ. ಈ ಪ್ರಕರಣದ ಹಿಂದಿರುವ ಪ್ರಮುಖರು, ಸಂಘಟನೆ ಹಾಗೂ ಹಲ್ಲೆಯ ಉದ್ದೇಶವನ್ನ ಪತ್ತೆ ಹಚ್ಚಲು ಆಗಿಲ್ಲ. ಇದರಲ್ಲಿ ಪೊಲೀಸರು ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಈ ಪ್ರಕರಣದ ತೀವ್ರತೆಯನ್ನ ಪರಿಗಣಿಸಿಬೇಕು. ಕೂಡಲೇ ಹಲ್ಲೆಯ ಹಿಂದಿರುವ ಪ್ರಮುಖರು, ಸಂಘಟನೆಯನ್ನ ಪತ್ತೆ ಹಚ್ಚಬೇಕು. ನಮಗೆ ನ್ಯಾಯ ಒದಗಿಸಬೇಕು ಎಂದು ಗೃಹ ಸಚಿವರಿಗೆ ಪತ್ರದ ಮೂಲಕ ಶಾಸಕ ತನ್ವೀರ್ ಸೇಠ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News