ರವಿ ಪೂಜಾರಿಯನ್ನು ವೈಯಾಲಿಕಾವಲ್ ಪೊಲೀಸರ ವಶಕ್ಕೆ ನೀಡಿದ ಕೋರ್ಟ್

Update: 2020-03-08 14:59 GMT

ಬೆಂಗಳೂರು, ಮಾ.8: ಕೊಲೆ ಪ್ರಕರಣವೊಂದರ ಸಂಬಂಧ ಹೆಚ್ಚಿನ ತನಿಖೆ ನಡೆಸಲು ಭೂಗತ ಪಾತಕಿ ರವಿ ಪೂಜಾರಿ ಅನ್ನು ನಗರದ 30ನೇ ಎಸಿಎಂಎಂ ಕೋರ್ಟ್ ವೈಯಾಲಿಕಾವಲ್ ಠಾಣಾ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ನಗರದ ಶ್ರೀನಿವಾಸ ಎಂಟರ್ಪ್ರೈಸಸ್ ರಿಯಲ್ ಎಸ್ಟೇಟ್ ಉದ್ಯಮಿ ಸುಬ್ಬರಾಜು ಅವರನ್ನು ದುಷ್ಕರ್ಮಿಗಳು 2001ರ ಜನವರಿ ತಿಂಗಳಿನಲ್ಲಿ ಕೊಲೆಗೈದಿದ್ದರು. ಈ ಸಂಬಂಧ ಹೆಚ್ಚಿನ ವಿಚಾರಣೆಗೆ ಒಳಪಡಿಸಲು ರವಿ ಪೂಜಾರಿಯನ್ನು ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಯನ್ನು ಮಾ.19ರವರೆಗೆ ಪೊಲೀಸ್ ವಶಕ್ಕೆ ನೀಡಿದೆ.

ಸುಬ್ಬರಾಜು ಕಚೇರಿಗೆ ನುಗ್ಗಿದ್ದ ಇಬ್ಬರು ಅಪರಿಚಿತರು ಪಿಸ್ತೂಲಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಸೇರಿದಂತೆ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದ್ದು, ಘಟನೆ ಬಳಿಕ ರವಿ ಪೂಜಾರಿ ಮತ್ತವನ ಸಹಚರರು ತಲೆಮರೆಸಿಕೊಂಡಿದ್ದರು. ವಿಚಾರಣೆ ಹಂತದಲ್ಲಿ ಮುತ್ತಪ್ಪ ರೈ ಸೇರಿದಂತೆ ಐವರು ಖುಲಾಸೆಗೊಂಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರವಿ ಪೂಜಾರಿ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News