ಭದ್ರತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ಮಧ್ಯಪ್ರದೇಶ ಶಾಸಕರು

Update: 2020-03-10 13:59 GMT

ಬೆಂಗಳೂರು, ಮಾ.10: ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಮಧ್ಯಪ್ರದೇಶದ ಶಾಸಕರು, ತಮಗೆ ಸೂಕ್ತ ಭದ್ರತೆ ಒದಗಿಸುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ.

ಮಧ್ಯಪ್ರದೇಶದ ಕೆಲ ಶಾಸಕರು, ಸಂಸದರು ಇಲ್ಲಿನ ದೇವನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ನೆಲೆಸಿದ್ದು, 'ಕೆಲವು ಅಗತ್ಯ ಕೆಲಸಗಳ ಸಂಬಂಧ ಬೆಂಗಳೂರಿಗೆ ಸ್ವಯಂ ಪ್ರೇರಿತವಾಗಿ ಬಂದಿದ್ದೆವು. ಈ ಸಂಬಂಧ ಬೆಂಗಳೂರಿನಲ್ಲಿ ಉಳಿದುಕೊಳ್ಳಲು ಮತ್ತು ನಗರದ ಸುತ್ತ ಒಡಾಡಲು ನಮಗೆ ಸ್ಥಳೀಯ ಪೊಲೀಸರಿಂದ ಭದ್ರತೆ ನೀಡಬೇಕು' ಎಂದು ಮನವಿ ಮಾಡಿ ಐಜಿಪಿಗೆ ಪತ್ರ ಬರೆದು ಎಲ್ಲ 19 ಶಾಸಕರು ಸಹಿ ಹಾಕಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News