×
Ad

ಕನ್ನಡ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

Update: 2020-03-10 22:21 IST

ಉಡುಪಿ, ಮಾ.10: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ರ ಜನವರಿ ತಿಂಗಳಿನಿಂದ ಡಿಸೆಂಬರ್ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ವಿವಿಧ ಬಹುಮಾನಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಕೃತಿಗಳ ಪ್ರಕಾಶಕರು/ ಮುದ್ರಕರು/ ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು -2019 ಬಹುಮಾನವನ್ನು ನೀಡಲಾಗುವುದು. ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದು.

ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಎ.4ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು ಇಲ್ಲಿಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು, ದೂರವಾಣಿ: 080-22484516/ 22107704, ವೆಬ್‌ಸೈಟ್:  www.kannadapustakapradhikara.com ಅನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News