ಕೊರೋನ ಭೀತಿ ಹಿನ್ನೆಲೆ: ಕೆಎಸ್‌ಆರ್‌ಟಿಸಿಯಿಂದ ಮುಂಜಾಗೃತಾ ಕ್ರಮ

Update: 2020-03-10 17:44 GMT

ಬೆಂಗಳೂರು, ಮಾ.10: ಕೊರೋನ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ರಾಜ್ಯದ ವಿವಿಧ ಸ್ಥಳಗಳಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಆರೋಗ್ಯದ ದೃಷ್ಟಿಯಿಂದ ಹಲವು ಮುಂಜಾಗೃತ ಕ್ರಮ ಕೈಗೊಂಡಿದೆ.

ಬಸ್‌ನ ಒಳ ಮತ್ತು ಹೊರ ಭಾಗವನ್ನು ಸ್ವಚ್ಛವಾಗಿಡುವುದರ ಜತೆಗೆ ಬಸ್‌ಗಳ ಒಳಗೆ ಸಾರ್ವಜನಿಕ ಪ್ರಯಾಣಿಕರು ಬಳಸುವ ವಸ್ತುಗಳನ್ನು ಸೋಂಕು ನಿವಾರಣಾ ದ್ರಾವಣಗಳಿಂದ ಶುಚಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸಿಬ್ಬಂದಿಗಳಿಗೆ ಮಾಸ್ಕ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಬಸ್ ನಿಲ್ದಾಣಗಳಲ್ಲಿ ಜಿಂಗಲ್ಸ್ ಮೂಲಕ ಕೊರೋನ ವೈರಸ್ ಸೋಂಕಿನ ಕುರಿತು ಪ್ರಯಾಣಿಕರ ಮಾಹಿತಿಗೆ ಪ್ರಚಾರ ಮಾಡಲಾಗುತ್ತಿದೆ ಹಾಗೂ ಸೋಂಕಿನ ಎಚ್ಚರದ ಬಗ್ಗೆ ಕರಪತ್ರಗಳನ್ನು ಮುದ್ರಿಸಿ ಹಂಚಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News