ವಿಷ ಸೇವಿಸಿ ಆತ್ಮಹತ್ಯೆ

Update: 2020-03-11 15:59 GMT

ಕೊಲ್ಲೂರು, ಮಾ.11: ವೈಯಕ್ತಿತ ಕಾರಣಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಿತ್ತೂರು ಗ್ರಾಮದ ಆನಂದನಗರ ದಿಂದ ವರದಿಯಾಗಿದೆ.

ನರಸಿಂಹ ನಾಯ್ಕ (53) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಒಂದು ವರ್ಷದ ಹಿಂದೆ ಇವರಿಗೆ ವಿಷಪೂರಿತ ಹಾವು ಕಚ್ಚಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಇದರಿಂದ ತನ್ನ ಆರೋಗ್ಯ ಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂಬ ಚಿಂತೆಯಿಂದ ಅವರು ಮಾ.7ರ ಬೆಳಗ್ಗೆ ಆನಂದನಗರ ಹುಬ್ಬಳಗಡಿಯ ಹಾಡಿಯಲ್ಲಿ ವಿಷಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟರು.

ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News