×
Ad

ಕ್ರೀಡಾಪಟುಗಳಿಗೆ ನಗದು ಬಹುಮಾನ; ಅರ್ಜಿ ಆಹ್ವಾನ

Update: 2020-03-12 20:36 IST

ಉಡುಪಿ, ಮಾ.12: 2018-2019ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಪಡೆದ ಹಾಗೂ ಭಾರತ ವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಬಹುಮಾನ ವನ್ನು ನೀಡಲಾಗುತ್ತಿದೆ.

ಒಲಿಂಪಿಕ್ ಗೇಮ್ಸ್, ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ವರ್ಲ್ಡ್ ಕಪ್/ ವರ್ಲ್ಡ್ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಹಾಗೂ ನ್ಯಾಷನಲ್ ಗೇಮ್ಸ್, ನ್ಯಾಷನಲ್ ಚಾಂಪಿಯನ್‌ಶಿಪ್, ಜೂನಿಯರ್ ನ್ಯಾಷನಲ್ಸ್ ಹಾಗೂ ಸಬ್‌ಜೂನಿಯರ್ ನ್ಯಾಷನಲ್ಸ್‌ಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಈ ನಗದು ಬಹುಮಾನಕ್ಕೆ ಅರ್ಹ ರಾಗಿರುತ್ತಾರೆ.

ಅರ್ಹ ಕ್ರೀಡಾಪಟುಗಳು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ (ದೂರವಾಣಿ ಸಂಖ್ಯೆ: 0820-2521324, 9480886467) ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಡೀಕೃತ ದಾಖಲೆ ಗಳೊಂದಿಗೆ ಎ.15ರೊಳಗೆ ಸಲ್ಲಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News