ಮಂಡ್ಯ: ಬಸ್ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಮಾಜಿ ಸೈನಿಕ
Update: 2020-03-12 16:15 GMT
ಮಂಡ್ಯ, ಮಾ.12: ಹೃದಯಾಘಾತದಿಂದ ಮಾಜಿ ಸೈನಿಕ ಬಸ್ಸಿನಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ಮದ್ದೂರು ತಾಲೂಕಿನ ನಿಡಘಟ್ಟ ಸಮೀಪ ನಡೆದಿದೆ.
ಚಾಮರಾಜ ನಗರದ ಜಿಲ್ಲೆಯ ಹನೂರು ತಾಲೂಕಿನ ಹಳೆ ಮಾರ್ಟಳ್ಳಿ ಗ್ರಾಮದ ಮಾಜಿ ಸೈನಿಕ ಗುರುಸ್ವಾಮಿ (70) ಮೃತ ವ್ಯಕ್ತಿ. ಇವರು ಬುಧವಾರ ವೈಯಕ್ತಿಕ ಕೆಲಸಕ್ಕಾಗಿ ಬೆಂಗಳೂರಿಗೆ ಹೋಗಿ ನಂತರ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ವಾಪಾಸ್ ಹೋಗುತ್ತಿರುವ ನಿಡಘಟ್ಟ ಸಮೀಪ ಬಸ್ಸಿನಲ್ಲಿ ಕುಳಿತಿದ್ದ ಸ್ಥಿತಿಯಲ್ಲೆ ಕುಸಿದುಬಿದ್ದಿದ್ದಾರೆ.
ತಕ್ಷಣ ಇವರನ್ನು ಪಟ್ಟಣದ ಗುರುಶಾಂತಪ್ಪ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.