ಅಮಿತ್ ಶಾರನ್ನು ಭೇಟಿಯಾದ ಜ್ಯೋತಿರಾದಿತ್ಯ ಸಿಂದಿಯಾ
Update: 2020-03-12 16:26 GMT
ಹೊಸದಿಲ್ಲಿ, ಮಾ. 12: ಬಿಜೆಪಿಗೆ ಸೇರಿದ ಒಂದು ದಿನದ ಬಳಿಕ ಜ್ಯೋತಿರಾದಿತ್ಯ ಸಿಂದಿಯಾ ಗುರುವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಇದಲ್ಲದೆ ಸಿಂದಿಯಾ ಬಿಜೆಪಿ ನಾಯಕ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕೂಡ ಇಲ್ಲಿನ ಅವರ ನಿವಾಸದಲ್ಲಿ ಇಂದು ಬೆಳಗ್ಗೆ ಔಪಚಾರಿಕವಾಗಿ ಭೇಟಿಯಾದರು. ತನ್ನನ್ನು ಸಿಂದಿಯಾ ಅವರು ಭೇಟಿಯಾದ ಬಳಿಕ ಪ್ರತಿಕ್ರಿಯಿಸಿರುವ ಅಮಿತ್ ಶಾ, ಸಿಂದಿಯಾ ಅವರ ಬಿಜೆಪಿ ಸೇರ್ಪಡೆಯಿಂದ ಮಧ್ಯಪ್ರದೇಶದ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಬಿಜೆಪಿ ಇನ್ನಷ್ಟು ಬಲ ಬರಲಿದೆ ಎಂದರು. ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಸಿಂದಿಯಾ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೆ,
ಕಾಂಗ್ರೆಸ್ಗೆ ವಾಸ್ತವದ ಅರಿವಿಲ್ಲ. ಹೊಸ ಚಿಂತನೆ ಹಾಗೂ ಹೊಸ ನಾಯಕತ್ವವನ್ನು ಅದು ಮುಕ್ತವಾಗಿ ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ್ದರು.